ADVERTISEMENT

ಸರ್ಕಾರದ ನಿಲುವು ಖಂಡಿಸಿ ಸಭಾತ್ಯಾಗ

ಕಾಲ್ಪನಿಕ ವೇತನ ಬಡ್ತಿ: ಸಿಎಂ ಜತೆ ಸಭೆ: ಜಿಟಿಡಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 20:00 IST
Last Updated 12 ಡಿಸೆಂಬರ್ 2018, 20:00 IST

ಬೆಳಗಾವಿ: ಕಾಲ್ಪನಿಕ ವೇತನ ಬಡ್ತಿ ವಿಷಯದಲ್ಲಿ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳದ್ದನ್ನು ಖಂಡಿಸಿ ಬಿಜೆಪಿಯ ಕೆಲ ಸದಸ್ಯರು ಹಾಗೂ ಪುಟ್ಟಣ್ಣ ವಿಧಾನ ಪರಿಷತ್‌ನಲ್ಲಿ ಬುಧವಾರ ಸಭಾತ್ಯಾಗ ಮಾಡಿದರು.

ಬಡ್ತಿ ಕುರಿತು ಪುಟ್ಟಣ್ಣ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಅಧಿವೇಶನ ಮುಗಿಯುವುದರೊಳಗಾಗಿ ಬಡ್ತಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಅವರೊಂದಿಗೆ ಸಭೆ ಆಯೋಜಿಸಲಾಗುವುದು ಎಂದರು.

ಬಸವರಾಜ ಹೊರಟ್ಟಿ ಅಧ್ಯಕ್ಷತೆಯ ಸಮಿತಿ ಈ ಕುರಿತು ನೀಡಿರುವ ವರದಿಯನ್ನು ಸರ್ಕಾರ ಒಪ್ಪಿಕೊಳ್ಳುತ್ತದೆಯೇ ಎಂದು ಪುಟ್ಟಣ್ಣ ಪ್ರಶ್ನಿಸಿದರು. ಅದಕ್ಕೆ ಸಚಿವರಿಂದ ಸ್ಪಷ್ಟ ಉತ್ತರ ಸಿಗದಿದ್ದರಿಂದ ಅರುಣ ಶಹಾಪುರ, ನಾರಾಯಣ ಸ್ವಾಮಿ, ಎಸ್‌.ವಿ. ಸಂಕನೂರ ಮತ್ತಿತರರು ಹೊರ ನಡೆದರು.

ADVERTISEMENT

ಇದಕ್ಕೂ ಮುನ್ನ ನಡೆದ ಎರಡು ಗಂಟೆಗಳ ಸುದೀರ್ಘ ಚರ್ಚೆಯಲ್ಲಿ ಕೆ.ಟಿ. ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಬಸವರಾಜ ಹೊರಟ್ಟಿ, ಶರಣಪ್ಪ ಮಟ್ಟೂರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.