ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಜತೆಗೆ ಮಂಗಳವಾರ ರಾತ್ರಿ ದೂರವಾಣಿ
ಯಲ್ಲಿ ಮಾತುಕತೆ ನಡೆಸಿದ್ದು, ಶಾಂತಿ ಕಾಪಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
‘ಗಡಿ ವಿಚಾರದಲ್ಲಿ ರಾಜ್ಯದ ನಿಲುವಿನಲ್ಲಿ ಬದಲಾವಣೆ ಇಲ್ಲ. ಆದರೆ ಎರಡೂ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆಗೆ ನಾವು ಒಪ್ಪಿಕೊಂಡಿದ್ದೇವೆ’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.