ಬೆಳಗಾವಿ: ಲಾಕ್ಡೌನ್ನಿಂದಾಗಿ ಇಲ್ಲಿ ಸಿಲುಕಿಕೊಂಡಿದ್ದ ರಾಜಸ್ಥಾನದ ವಲಸೆ ಕಾರ್ಮಿಕನಿಗೆ ಅವರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳಲು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅನುಕೂಲ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ನೆಹರು ನಗರದ ಹಾಸ್ಟೆಲ್ನಲ್ಲಿ ತಂಗಿದ್ದ ವ್ಯಕ್ತಿಗೆ ಖಾಸಗಿ ವಾಹನ ವ್ಯವಸ್ಥೆ ಮಾಡಿಕೊಟ್ಟು, 1,500 ಕಿ.ಮೀ. ದೂರದ ಬಾರ್ಮೇರ ಎನ್ನುವ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಮಾರ್ಗ ಮಧ್ಯದಲ್ಲಿ ಪೊಲೀಸರು ಅಥವಾ ಇತರ ಇಲಾಖೆಯವರಿಂದ ತೊಂದರೆಯಾಗದಂತೆ ಪಾಸ್ ಕೊಟ್ಟಿದ್ದಾರೆ. ಅವರೊಂದಿಗೆ ತೆರಳಲು ಮತ್ತಿಬ್ಬರು ಮುಂದಾಗಿದ್ದರು. ಆದರೆ, ಅವಕಾಶ ನೀಡಿಲ್ಲ.
ವ್ಯಕ್ತಿಯು ಊರು ತಲುಪಿದ ಬಳಿಕ ಅಲ್ಲಿನ ಫೋಟೊಗಳನ್ನು ಕಳುಹಿಸಿದ್ದಾರೆ. ನೆರವಾದ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ತಾಯಿ–ಮಗಳು ಊರಿಗೆ ಮರಳಲು ಎಸ್ಪಿ ಲಕ್ಷ್ಮಣ ನಿಂಬರಗಿ ವಾಹನ ವ್ಯವಸ್ಥೆ ಮಾಡಿಕೊಟ್ಟು ನೆರವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.