ADVERTISEMENT

ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2022, 10:45 IST
Last Updated 26 ಅಕ್ಟೋಬರ್ 2022, 10:45 IST
   

ಬೆಳಗಾವಿ: ರಾಮದುರ್ಗ ‌ತಾಲ್ಲೂಕಿನ‌ ಮುದೇನೂರು ಗ್ರಾಮದಲ್ಲಿ ಬುಧವಾರ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

ಎಲ್ಲರನ್ನೂ ರಾಮದುರ್ಗದ ಸರ್ಕಾರಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಳಗಳಿಗೆ ನೀರು ಪೂರೈಸುವ ಪೈಪ್ ಲೈನ್ ಒಡೆದು ಚರಂಡಿ ನೀರು ಸೇರಿಕೊಂಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ.ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಬಂದು ಪರಿಶೀಲಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.