ಬೆಳಗಾವಿ: ಇಲ್ಲಿನ ಅಂಬೇಡ್ಕರ್ ರಸ್ತೆಯಲ್ಲಿ ಸೋಮವಾರ ರಾತ್ರಿ ಪಬ್ ನ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವಿಗೀಡಾಗಿದ್ದಾನೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಮೂಲದ ಲೋಕೇಶ ಶಾನಭಾಗ (28) ಸಾವಿಗೀಡಾದ ಯುವಕ.
ಸಂಜೆ ಗೆಳೆಯ, ಗೆಳತಿಯರ ಜತೆ ಪಬ್ ಗೆ ಬಂದಿದ್ದ ಯುವಕ ಕುಡಿದು ನೃತ್ಯ ಮಾಡಿದ್ದ. ಏಕಾಏಕಿ ಪಬ್ ನ ಕಿಟಕಿ ತೆರೆದು ಕೆಳಗೆ ಜಿಗಿದ ಎಂದು ಮೂಲಗಳು ತಿಳಿಸಿವೆ.
ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಪ್ರಾಣಬಿಟ್ಟಿದ್ದರು. ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.