ಬೆಳಗಾವಿ: ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಗೋಕಾಕ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 231ರ ಮತಗಟ್ಟೆ ಅಧಿಕಾರಿ ಪ್ರಕಾಶ ವೀರಭದ್ರಪ್ಪ ನಾಶಿಪುಡಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಸವದತ್ತಿ ತಾಲ್ಲೂಕಿನ ತೆಂಗಿನಹಾಳ ರಾಯಣ್ಣ ನಗರದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಪ್ರಕಾಶ ಅವರನ್ನು ಮತಗಟ್ಟೆ ಅಧಿಕಾರಿಯಾಗಿ ನಿಯೋಜಿಸಲಾಗಿತ್ತು. ಇವರು ಬುಧವಾರ ಮಸ್ಟರಿಂಗ್ ವೇಳೆ ಚುನಾವಣಾ ಕೇಂದ್ರಕ್ಕೆ ಮದ್ಯ ಸೇವಿಸಿ ಬಂದಿದ್ದರು. ಇದರಿಂದ ಚುನಾವಣಾ ಕಾರ್ಯಕ್ಕೆ ಅಡ್ಡಿಯುಂಟಾಗಿತ್ತು.
ಇದಲ್ಲದೇ, ವೈದ್ಯಕೀಯ ತಪಾಸಣೆ ವೇಳೆ ಅವರು ಆಸ್ಪತ್ರೆಯಿಂದ ಓಡಿ ಹೋಗಿದ್ದರು. ಇವೆಲ್ಲ ಕಾರಣಗಳಿಂದಾಗಿ ಪ್ರಕಾಶ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.