ಬೆಳಗಾವಿ: ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಖಾನಾಪುರದಲ್ಲಿ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿದಿದೆ. ಮಹದಾಯಿ ಹಾಗೂ ಮಲಪ್ರಭಾ ನದಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಮಳೆ ಮತ್ತು ಗಾಳಿಗೆ ಜಾಂಬೋಟಿ ಮತ್ತು ಕಣಕುಂಬಿ ಅರಣ್ಯದಲ್ಲಿ ಅಲ್ಲಲ್ಲಿ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ವಿದ್ಯುತ್ ಸರಬರಾಜಿನಲ್ಲೂ ವ್ಯತ್ಯಯ ಉಂಟಾಗಿದೆ.
ಬೆಳಗಾವಿ, ರಾಮದುರ್ಗ, ಹಿರೇಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ ಹಾಗೂ ಸಾಂಬ್ರಾದಲ್ಲಿ ಜಿಟಿಜಿಟಿ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.