ADVERTISEMENT

ಬೆಳಗಾವಿ: ವಿದ್ಯಾರ್ಥಿನಿಯರ ಸಂಶೋಧನಾ ವರದಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ನೋಟುಗಳಿಂದ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 17:42 IST
Last Updated 2 ಡಿಸೆಂಬರ್ 2018, 17:42 IST

ಬೆಳಗಾವಿ: ಕೈಯಿಂದ ಕೈಗೆ ಬದಲಾಗುವ ನೋಟುಗಳಿಂದ ಹರಡುವ ಸೋಂಕುಗಳ ಬಗ್ಗೆ, ನಗರದ ಕ್ಯಾಂಪ್‌ನಲ್ಲಿರುವ ಕೇಂದ್ರೀಯ ವಿದ್ಯಾಲಯ–2ರ 8ನೇ ತರಗತಿ ವಿದ್ಯಾರ್ಥಿನಿಯರು ಮಂಡಿಸಿದ ಸಂಶೋಧನಾ ವರದಿಯು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ವಿದ್ಯಾರ್ಥಿನಿಯರಾದ ಖುಷಿ ಅನಗೋಳಕರ ಹಾಗೂ ಪ್ರಾರ್ಥನಾ ಕುಲಕರ್ಣಿ, ಬೆಂಗಳೂರಿನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್‌ ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ ತಮ್ಮ ಸಂಶೋಧನಾ ವರದಿಯನ್ನು ಮಂಡಿಸಿದ್ದರು. ಅದು ಡಿ.3ರಿಂದ 5ರವರೆಗೆ ಕಾನ್ಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT