ADVERTISEMENT

ಸಂತ್ರಸ್ತ ನೇಕಾರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 20:00 IST
Last Updated 15 ಸೆಪ್ಟೆಂಬರ್ 2019, 20:00 IST
ರಮೇಶ ನೀಲಕಂಠಪ್ಪ ಹವಲಕೋಡ
ರಮೇಶ ನೀಲಕಂಠಪ್ಪ ಹವಲಕೋಡ   

ರಾಮದುರ್ಗ (ಬೆಳಗಾವಿ): ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾದ ಹಲಗತ್ತಿ ಗ್ರಾಮದ ನೇಕಾರ ರಮೇಶ ನೀಲಕಂಠಪ್ಪ ಹವಳಕೋಡ (38) ಶನಿವಾರ ತಡರಾತ್ರಿ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಇತ್ತೀಚೆಗೆ ಉಂಟಾದ ಪ್ರವಾಹದಿಂದ ಹಲಗತ್ತಿ ಗ್ರಾಮ ಸಂಪೂರ್ಣ ಮುಳುಗಡೆಯಾಗಿ ನೇಕಾರ ರಮೇಶ ಅವರ ಮನೆ ಬಿದ್ದು, ವಿದ್ಯುತ್ ಮಗ್ಗಕ್ಕೆ ಅಪಾರ ಹಾನಿಯಾಗಿತ್ತು. ತಿಂಗಳು ಕಳೆದರೂ ಸರ್ಕಾರದಿಂದ ಪರಿಹಾರ ದೊರಕದೆ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.