ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ ನಿಯಂತ್ರಣ ಕುರಿತುರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಭಾಷಣದ ಲೈವ್ ಇಲ್ಲಿದೆ
ಕೋವಿಡ್–19 ಸಾಂಕ್ರಾಮಿಕದ ವಿರುದ್ಧ ಮುಂದಿನ ಹೋರಾಟಗಳ ಕುರಿತು ಜನರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಧಿಸಲಾಗಿದ್ದ 7 ದಿನಗಳ ಲಾಕ್ಡೌನ್ ಮಂಗಳವಾರ ಅಂತ್ಯವಾಗಲಿದೆ.
ಬೆಂಗಳೂರು ನಗರ ಕೋವಿಡ್ ಹೊಸ ಹಾಟ್ಸ್ಪಾಟ್ ಆಗಿ ಪರಿಣಮಿಸುತ್ತಿರುವುದರಿಂದ ಎದುರಾಗಿರುವ ಸವಾಲುಗಳು ಹಾಗೂ ಅದನ್ನು ಪರಿಹರಿಸಿಕೊಂಡು ಮುನ್ನಡೆಯುವ ಕುರಿತು ಜನರಿಗೆ ಅವರು ತಿಳಿ ಹೇಳಿದರು. ಅಲ್ಲದೆ, ಲಾಕ್ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದರು. ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತೆ ಅವರು ಮನವಿ ಮಾಡಿದರು. ಖಾಸಗಿ ಆಸ್ಪತ್ರೆಗಳು ಕೋವಿಡ್ ಪೀಡಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಟ್ಟಿರುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.