ADVERTISEMENT

ನಮ್ಮ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ: ಸಂಚಾರ ವ್ಯತ್ಯಯ

ಪ್ರಜಾವಾಣಿ ವಿಶೇಷ
Published 21 ಮಾರ್ಚ್ 2024, 13:05 IST
Last Updated 21 ಮಾರ್ಚ್ 2024, 13:05 IST

ಬೆಂಗಳೂರು: ಅತ್ತಿಗುಪ್ಪೆ ನಿಲ್ದಾಣದಲ್ಲಿ ಮೆಟ್ರೊ ರೈಲು ಚಲಿಸುತ್ತಿದ್ದ ಸಂದರ್ಭದಲ್ಲಿ ಹಳಿಗೆ ಬಿದ್ದು ಧ್ರುವ್ ಠಕ್ಕರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಾರಾಷ್ಟ್ರದ ಧ್ರುವ್, ಸರ್ಕಾರಿ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮೊದಲ ವರ್ಷದಲ್ಲಿ ಓದುತ್ತಿದ್ದರು. ಗುರುವಾರ ನಿಲ್ದಾಣಕ್ಕೆ ಬಂದಿದ್ದ ಇವರು, ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು. ರೈಲು ಬರುತ್ತಿದ್ದಂತೆ ಅದರ ಎದುರು ಹಳಿ ಮೇಲೆ ಜಿಗಿದಿದ್ದರು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT