ADVERTISEMENT

ಮಂಗಳೂರು–ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌: ಪ್ರಾಥಮಿಕ ಹಂತದ ಚರ್ಚೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2023, 10:58 IST
Last Updated 9 ನವೆಂಬರ್ 2023, 10:58 IST
ದಿನೇಶ್ ಗುಂಡೂರಾವ್‌
ದಿನೇಶ್ ಗುಂಡೂರಾವ್‌   

ಬೆಂಗಳೂರು: ಬೆಂಗಳೂರು–ಮಂಗಳೂರು ಇಂಟಿಗ್ರೇಟೆಡ್ ಗ್ರೀನ್‌ ಫೀಲ್ಡ್‌ ಹೈ ಸ್ಪೀಡ್ ಕಾರಿಡಾರ್‌ ನಿರ್ಮಾಣ ಕುರಿತಂತೆ ಯೂರೋಪಿಯನ್‌ ಬ್ಯುಸಿನೆಸ್‌ ಅಂಡ್‌ ಟೆಕ್ನಾಲಜಿ ಸಂಸ್ಥೆಯ ನಿಯೋಗ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರೊಂದಿಗೆ ಗುರುವಾರ ಚರ್ಚೆ ನಡೆಸಿತು.

ಈ ಹೈಸ್ಪೀಡ್ ಕಾರಿಡಾರ್‌ ನಿರ್ಮಾಣದಿಂದ ಮಂಗಳೂರು ಅಭಿವೃದ್ಧಿಯ ಜತೆಗೆ ಮಾರ್ಗ ಮಧ್ಯೆ ಬರುವ ಇತರ ಎಲ್ಲ ನಗರಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ. 6 ರಿಂದ 8 ಪಥಗಳ ಈ ಕಾರಿಡಾರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ಮಾತುಕತೆ ನಡೆಯಿತು ಎಂದು ದಿನೇಶ್ ಗುಂಡೂರಾವ್‌ ಸುದ್ದಿಗಾರರಿಗೆ ತಿಳಿಸಿದರು.

ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೇ, ಇತರ ನಗರಗಳಿಗೂ ಹೆಚ್ಚಿನ ಬಂಡವಾಳ ಹರಿದು ಬರಲಿದ್ದು, ಈ ಎಲ್ಲ ನಗರಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರಿಗೂ ಇದು ಸಂಪರ್ಕ ಕಲ್ಪಿಸುವುದರಿಂದ ವ್ಯಾಪಾರ– ಉದ್ಯಮಗಳ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು  ಅವರು ಅಭಿಪ್ರಾಯಪಟ್ಟರು.

ADVERTISEMENT

ಕಾರಿಡಾರ್‌ನ ಸಾಗಿ ಹೋಗುವ ನಕಾಶೆ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯವಿದೆ. ಈ ವಿಚಾರವಾಗಿ ಲೋಕೋಪಯೋಗಿ ಸಚಿವರು ಮತ್ತು ಮುಖ್ಯಮಂತ್ರಿ ಅವರ ಜತೆ ಮಾತುಕತೆ ನಡೆಸುವುದಾಗಿಯೂ ದಿನೇಶ್‌ ಭರವಸೆ ನೀಡಿದರು.

ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.