ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕಾರ್ಯವು ಮಂಗಳವಾರ ಬೆಳಿಗ್ಗೆ ಆರಂಭಗೊಂಡಿತು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಪ್ಲಾಜಾಗಳಲ್ಲಿ ಟೋಲ್ ಸಿಬ್ಬಂದಿ ಟೋಲ್ ಸಂಗ್ರಹಕ್ಕೆ ಮುಂದಾದರು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ಸಂಗ್ರಹ ಕಾರ್ಯ ಕೊಂಚ ವಿಳಂಬ ಆಯಿತು.
ಪ್ರತಿಭಟನೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪೊಲೀಸರು ಟೋಲ್ ಪ್ಲಾಜಾಗಳಿಗೆ ಬಿಗಿ ಭದ್ರತೆ ಒದಗಿಸಿದ್ದಾರೆ. 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.