ADVERTISEMENT

ಬೆಂಗಳೂರು ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ

​ಪ್ರಜಾವಾಣಿ ವಾರ್ತೆ
Published 30 ಮೇ 2023, 7:15 IST
Last Updated 30 ಮೇ 2023, 7:15 IST
ಬಿ.ದಯಾನಂದ್‌
ಬಿ.ದಯಾನಂದ್‌   

ಬೆಂಗಳೂರು: ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಪ್ರಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾವಣೆ ಮಾಡಲಾಗಿದೆ.

ವಿಶೇಷ ಕಮಿಷ‌ರ್ (ಸಂಚಾರ) ಆಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ADVERTISEMENT

ಸಿಐಡಿಯ ಎಡಿಜಿಪಿ ಕೆ.ವಿ. ಶರತ್‌ಚಂದ್ರ ಅವರನ್ನು ಗುಪ್ತದಳದ ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.