ADVERTISEMENT

ಬೆಂಗಳೂರಿನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ: ಭದ್ರತೆಗೆ ಪೊಲೀಸರ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 2:37 IST
Last Updated 10 ಡಿಸೆಂಬರ್ 2024, 2:37 IST
ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ   

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (93) ಅವರು ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಇಲ್ಲಿನ ಸದಾಶಿವನಗರದ ಅವರ ನಿವಾಸದಲ್ಲಿ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಮಂಗಳವಾರ ಇಡೀ ದಿನ ಇಡಲಾಗುವುದು.

ಅಲ್ಲಿಗೆ ನಗರ ಪೊಲೀಸ್‌ ಕಮಿಷನರ್ ಬಿ.ದಯಾನಂದ ಹಾಗೂ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಅವರು ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.

ADVERTISEMENT

ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು.

ನಿವಾಸದ ಸುತ್ತಮುತ್ತ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.