ಬೆಂಗಳೂರು: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು 2018ನೇ ಸಾಲಿನ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ನೀಡಲು ಕೃತಿಗಳನ್ನು ಆಹ್ವಾನಿಸಿದೆ.
ಕೃತಿಗಳು ಸ್ವತಂತ್ರ ರಚನೆಯಾಗಿರಬೇಕು. ಅನುವಾದಗಳನ್ನು ಪರಿಗಣಿಸುವುದಿಲ್ಲ. ಪ್ರಶಸ್ತಿಯು ₹ 25,000 ನಗದು ಒಳಗೊಂಡಿದೆ.
ಆಸಕ್ತ ಲೇಖಕರು, ಪ್ರಕಾಶಕರು 2018ರಲ್ಲಿ ಪ್ರಕಟವಾದ ಕಥಾಸಂಕಲನದ ಮೂರು ಪ್ರತಿಗಳನ್ನು ಮಾರ್ಚ್ 31ರೊಳಗೆ ಸಲ್ಲಿಸಲು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.
ವಿಳಾಸ: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ನಂ.15, 2ನೇ ಅಡ್ಡರಸ್ತೆ, ನಿಸರ್ಗ ಬಡಾವಣೆ, ಉಲ್ಲಾಳ ಆರ್ಟಿಒ ಕಚೇರಿ ಹತ್ತಿರ, ಬೆಂಗಳೂರು – 560091
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9980305837ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.