ADVERTISEMENT

ಗುಂಡೇಟಿಗೆ ಬೇಟೆಗಾರ ಬಲಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 14:31 IST
Last Updated 12 ಡಿಸೆಂಬರ್ 2018, 14:31 IST

ಮಡಿಕೇರಿ: ತಾಲ್ಲೂಕಿನ ಭಾಗಮಂಡಲ ವ್ಯಾಪ್ತಿಯ ಮುಂಡ್ರೋಟು ಅರಣ್ಯ ಪ್ರದೇಶದಲ್ಲಿ ಎರಡು ಬೇಟೆಗಾರರ ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಬೇಟೆಗಾರರೊಬ್ಬರು ಮೃತಪಟ್ಟಿದ್ದಾರೆ.

ಕೇರಳದ ತಳಿಪರಂಬು ಮಿನಂಕೇರಿ ನಿವಾಸಿ ಜಾರ್ಜ್ (52) ಗುಂಡೇಟಿಗೆ ಬಲಿಯಾದವರು.

ಮಂಗಳವಾರ ರಾತ್ರಿ ಎರಡು ಗುಂಪುಗಳು ಪ್ರತ್ಯೇಕವಾಗಿ ಬೇಟೆಗೆ ತೆರಳಿದ್ದವು ಎನ್ನಲಾಗಿದೆ. ಅರಣ್ಯ ಪ್ರದೇಶದಲ್ಲಿ ಗುಂಪುಗಳು ಎದುರಾದ ವೇಳೆ ಮಾತಿನ ಚಕಮಕಿ ನಡೆದಿತ್ತು. ಘಟನೆಯಿಂದ ಆಕ್ರೋಶಗೊಂಡ ಒಂದು ಗುಂಪಿನ ಸದಸ್ಯರು ಜಾರ್ಜ್‌ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.