ADVERTISEMENT

ಮುಂದೆ ಒಳ್ಳೆಯ ದಿನಗಳು ಬರಲಿವೆ: ಸಿ.ಎಂ ಕನಸು ಹಂಚಿಕೊಂಡ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 9:06 IST
Last Updated 3 ಜೂನ್ 2023, 9:06 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ರಾಮನಗರ (ಕನಕಪುರ): ನನ್ನನ್ನು ಮುಖ್ಯಮಂತ್ರಿ ಮಾಡಬೇಕು ಅಂತ ನೀವು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ರಿ. ಹೈಕಮಾಂಡ್ ಡಿಸಿಎಂ ಜವಾಬ್ದಾರಿ ನೀಡಿತು. ಆದರ, ನಿರಾಶೆಯಾಗಬೇಕಿಲ್ಲ. ‌ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಸನ್ಮಾನ ಸಮಾರಂಭದಲ್ಲಿ, ತಾವಿನ್ನೂ ಸಿ.ಎಂ ಹುದ್ದೆ ಆಕಾಂಕ್ಷಿ ಎಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯರು ಹೇಳಿದ ಕಿವಿಮಾತು ಕೇಳಿ ಒಪ್ಪಿಕೊಂಡೆ. ಆದರೆ, ನಿಮ್ಮ ನಿರೀಕ್ಷೆ ಹುಸಿಯಾಗುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.