ಮೈಸೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಲ್ಲಿನ ಚಾಮುಂಡಿ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಬಿಡುವಿನ ಸಮಯದಲ್ಲಿ ಶ್ರೀರಂಗಪಟ್ಟಣದ ಬಳಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗಿದ್ದರು.
ಕೊಡಗಿನಲ್ಲಿ ವಿಶ್ರಾಂತಿ ಪಡೆಯುವುದಕ್ಕಾಗಿ ಬರುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬರಮಾಡಿಕೊಳ್ಳಲಿರುವ ರಾಹುಲ್, ಬಳಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ ಅಲ್ಲಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ.
ಇವನ್ನೂ ಓದಿ...
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.