ಬೆಂಗಳೂರು: ಬುಧವಾರ ಕೂಡ ಕಾರ್ಮಿಕರ ಮುಷ್ಕರ ನಡೆಯಲಿದ್ದು, ಮಂಗಳವಾರ ಬಂದ್ ತೀವ್ರತೆ ಕಡಿಮೆ ಇದ್ದ ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ ಕಚೇರಿ, ಶಾಲಾಕಾಲೇಜುಗಳು ನಡೆಯಲಿವೆ.
ಬಂದ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದ್ದ ವಿಟಿಯು, ರಾಣಿ ಚನ್ನಮ್ಮ, ಬೆಂಗಳೂರು, ದಾವಣಗೆರೆ ಸೇರಿದಂತೆ ವಿಶ್ವವಿದ್ಯಾಲಯಗಳು ಹಾಗೂ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುವುದಿಲ್ಲ.ಬೆಂಗಳೂರು ನಗರ ಸೇರಿದಂತೆ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳ ರಜೆಯನ್ನು ರದ್ದುಗೊಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.