ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣ ತನಿಖೆಗಾಗಿ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಚರಣ್ ರೆಡ್ಡಿಮಂಗಳವಾರ ವಿಜಯಪುರಕ್ಕೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರು ಆರೋಪಿಗಳನ್ನು ಐದು ದಿನ ಕಸ್ಟಡಿಗೆ ಪಡೆಯಲಾಗಿದೆ.
ಪಿಎಸ್ಐ ಗೋಪಾಲ ಹಳ್ಳೂರ, ಪೊಲೀಸ್ ಕಾನ್ಸ್ಟೆಬಲ್ಗಳಾದ ಚಂದ್ರಶೇಖರ ಜಾಧವ, ಸಿದ್ಧಾರೂಢ ರೂಗಿ, ಗೆದ್ದೆಪ್ಪ ನಾಯ್ಕೋಡಿ, ಕೊಲೆ ಮಾಡಿದ್ದಾಗಿ ಈಗಾಗಲೇ ಪೊಲೀಸರ ಎದುರು ಒಪ್ಪಿಕೊಂಡಿರುವ ಹಣಮಂತ ಪೂಜಾರಿ ಹಾಗೂ ಸಿದ್ಧಗೊಂಡಪ್ಪ ತಿಕ್ಕುಂಡಿ ಅವರನ್ನು ವಶಕ್ಕೆಪಡೆದಿರುವ ಸಿಐಡಿ ಹಿರಿಯ ಅಧಿಕಾರಿಗಳ ತಂಡ, ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದೆಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.