ಮೈಸೂರು: ಮೈಸೂರು ತಾಲ್ಲೂಕಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ 'ಡಾ.ವಿಷ್ಣುವರ್ಧನ್ ಸ್ಮಾರಕ ಭವನ' ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಚುವಲ್ ವೇದಿಕೆ ಮೂಲಕ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.
ಭಾರತಿ ವಿಷ್ಣುವರ್ಧನ್, ಅನಿರುದ್ಧ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಮುಡಾ ಆಧ್ಯಕ್ಷ ಎಚ್.ವಿ.ರಾಜೀವ್ ಪಾಲ್ಗೊಂಡರು.
ಐದು ಎಕರೆ ಜಮೀನಿನಲ್ಲಿ ಸ್ಮಾರಕ ಭವನ ನಿರ್ಮಾಣವಾಗಲಿದೆ. ಸರ್ಕಾರ 2010-11 ರ ಬಜೆಟ್ ನಲ್ಲಿ ₹11 ಕೋಟಿ ಅನುದಾನ ಮೀಸಲಿರಿಸಿತ್ತು. ಜಾಗಕ್ಕೆ ಸಂಬಂಧಿಸಿದಂತೆ ತಕರಾರು ಇದ್ದ ಕಾರಣ ನಿರ್ಮಾಣ ಕಾರ್ಯ ತಡವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.