ADVERTISEMENT

ಜನ್ಮದಿನ ನಿಮಿತ್ತ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ

​ಪ್ರಜಾವಾಣಿ ವಾರ್ತೆ
Published 13 ಮೇ 2020, 5:32 IST
Last Updated 13 ಮೇ 2020, 5:32 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ತಾವು ಊರಲ್ಲಿ ಇಲ್ಲದಿರುವುದರಿಂದ ಮೇ 15ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿನಮ್ರವಾಗಿ ಮನವಿ ಮಾಡಿದ್ದಾರೆ.

‘ತಾವು ಅನಿವಾರ್ಯ ಕಾರಣಗಳಿಂದ ಮೇ 14ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು’ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT