ಮೈಸೂರು: 'ಆರ್ಎಸ್ಎಸ್ ಮೂಲಗಳಿಂದ ಸಿಕ್ಕಿರುವ ಮಾಹಿತಿ ಎಂದರೆ, ಏಪ್ರಿಲ್ ನಂತರ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ಥಾನದಿಂದ ತೆಗೆಯುವ ಸಾಧ್ಯತೆ ಇದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾನುವಾರ ಮೈಸೂರಿನಲ್ಲಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಕಾಂಗ್ರೆಸ್ ನಾಯಕರೊಂದಿಗೆ ಶರತ್ ಬಚ್ಚೇಗೌಡ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಶರತ್ ಬಚ್ಚೇಗೌಡ ಪಕ್ಷಕ್ಕೆ ಬರುವ ಕುರಿತು ಮಾತುಕತೆ ನಡೆಯುತ್ತಿದೆ. ಇನ್ನು 15 ದಿನಗಳಲ್ಲಿ ತೀರ್ಮಾನವಾಗಲಿದೆ. ನಮ್ಮ ಪಕ್ಷ ಮತ್ತು ಶರತ್ ಸೇರಿ ಗ್ರಾ.ಪಂ. ಚುನಾವಣೆಯಲ್ಲಿ ಎದುರಿಸಿದ್ದರು. ಹೊಸಕೋಟೆ ಕ್ಷೇತ್ರದಲ್ಲಿ ಶೇ 70 ರಷ್ಟು ಬೆಂಬಲಿತರು ಗೆದ್ದಿದ್ದಾರೆ. ಅದಕ್ಕೆ ಧನ್ಯವಾದ ಹೇಳಲು ಭೇಟಿ ಮಾಡಿದ್ದರು' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.