ADVERTISEMENT

ಸಂಖ್ಯೆ ಇದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ಮಂಡಿಸಲಿ: ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 10:16 IST
Last Updated 11 ಜುಲೈ 2019, 10:16 IST
   

ಬೆಂಗಳೂರು: ಬಿಜೆಪಿ ಬಳಿ ಸಂಖ್ಯೆ ಇದ್ದರೆ ಸರ್ಕಾರ ಅವಿಶ್ವಾಸ ಮಂಡಿಸಲಿ. ಅದನ್ನು ಎದುರಿಸಲು ಸಿದ್ಧ ಎಂದು ಸಚಿವ ಕೃಷ್ಣಬೈರೇಗೌಡ ಅವರು ಕೇಸರಿ ಪಾಳಯಕ್ಕೆ ಸವಾಲೊಡ್ಡಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ಅಗಿದೆ. ಮುಖ್ಯಮಂತ್ರಿ ಇದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ವಿರೋಧ ಪಕ್ಷದ ಸವಾಲು ಎದುರಿಸಲು ಸಿದ್ಧರಿದ್ದೇವೆ. ಹಣಕಾಸು ಮಸೂದೆಯಲ್ಲಿ ಸರ್ಕಾರಕ್ಕೆ ಸೋಲಾದರೆ, ಆಗ ನೋಡೊಣ ಎಂದೂ ತಿಳಿಸಿದರು.

ADVERTISEMENT

ತಮ್ಮ ಬಳಿ ಸಂಖ್ಯೆ ಇದೆ ಎಂದು ಹೇಳಿಕೊಳ್ಳು ಬಿಜೆಪಿ ಅದನ್ನು ಸಾಬೀತುಪಡಿಸಲಿ. ಅವಿಶ್ವಾಸ ಯಾವಾಗ ಕೈಗೆ ತೆಗೆದುಕೊಳ್ಳಬೇಕು ಎಂಬುದು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.