ಬೆಂಗಳೂರು: ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಇಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.