ಮೈಸೂರು: ನಮ್ಮದು ಕೂಡ ಸಮ್ಮಿಶ್ರ ಸರ್ಕಾರ ಇದ್ದಂತೆ.ಹೀಗಾಗಿ ಎಲ್ಲರನ್ನೂ ತೃಪ್ತಿಪಡಿಸುವುದು ಅಸಾಧ್ಯ ಎಂದು ನೂತನ ಸಚಿವ ವಿ.ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ದಸರಾ ಗಜಪಡೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗ 17 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಮುಂದೆ ಹಲವು ಮಂದಿಗೆ ಸಚಿವ ಸ್ಥಾನ ಕಲ್ಪಿಸಬೇಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರಾಮದಾಸ್ ಅವರಂಥವರಿಗೆ ಅವಕಾಶ ಸಿಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.