ADVERTISEMENT

‘13ಕ್ಕೆ ದೆಹಲಿಯಲ್ಲಿ ಬಿಜೆಪಿ ಚರ್ಚೆ’

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:42 IST
Last Updated 9 ಜನವರಿ 2019, 19:42 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಬುಧವಾರ ತಿಳಿಸಿದರು.

‘ನನ್ನನ್ನೇ ದೆಹಲಿಗೆ ಬರುವಂತೆ ಅಮಿತ್‌ ಶಾ ಕರೆದಿದ್ದರು. ದೆಹಲಿಗೆ ಹೋಗಿ ಅವರ ಜತೆ ಚರ್ಚಿಸಿದ್ದೇನೆ. ಜ.13,14ರಂದು ದೆಹಲಿಯಲ್ಲಿ ರಾಜ್ಯದ ಸಂಸದರು, 104 ಶಾಸಕರು, ಎಂಎಲ್‌ಸಿಗಳೊಂದಿಗೆ ಪ್ರಧಾನಿ ಹಾಗೂ ಅಮಿತ್ ಶಾ ಮುಂಬರುವ ಲೋಕಸಭಾ ಚುನಾವಣೆ ಕುರಿತು ಅಭ್ಯರ್ಥಿಗಳು ಯಾರಾಗಬೇಕು ಎಂದು ಚರ್ಚಿಸಲಿದ್ದಾರೆ’ ಎಂದು ತಿಳಿಸಿದರು.

‘ರಮೇಶ್ ಜಾರಕಿಹೊಳಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಕೇವಲ ಊಹಾಪೋಹ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.