ADVERTISEMENT

ಆಗ ಅಪಪ್ರಚಾರ ಮಾಡಿ, ಈಗ ಲಸಿಕೆಗಾಗಿ ಭಿಕ್ಷೆ ಬೇಡ್ತಿವಿ ಎನ್ನುತ್ತೀರಿ: ರಾಮದಾಸ್

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 5:07 IST
Last Updated 7 ಜೂನ್ 2021, 5:07 IST
ಬಿಜೆಪಿ ಶಾಸಕ ರಾಮದಾಸ್‌
ಬಿಜೆಪಿ ಶಾಸಕ ರಾಮದಾಸ್‌   

ಬೆಂಗಳೂರು:ಅಂದು ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಬರುವಂತೆ ಮಾತನಾಡಿ, ಇಂದುಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಶಾಸಕ ರಾಮದಾಸ್‌ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ.ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆʼ ಎಂದು ತಿವಿದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದುಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.