ADVERTISEMENT

ಸಂಸದ ಅನಂತಕುಮಾರ್‌ ಹೆಗಡೆ ಖುಲಾಸೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 19:40 IST
Last Updated 27 ಫೆಬ್ರುವರಿ 2020, 19:40 IST
ಅನಂತ ಕುಮಾರ ಹೆಗಡೆ
ಅನಂತ ಕುಮಾರ ಹೆಗಡೆ   

ಬೆಂಗಳೂರು: ‘ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತೆ ಭಾಷಣ ಮಾಡಿದ ಆರೋಪದಿಂದ ಸಂಸದ ಅನಂತ ಕುಮಾರ ಹೆಗಡೆ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಖುಲಾಸೆಗೊಳಿಸಿದೆ.

ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸಿದ್ದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ಅವರು ಅನಂತಕುಮಾರ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯ ಆಧಾರದಲ್ಲಿ ಆರೋಪಮುಕ್ತಗೊಳಿಸಿದ್ದಾರೆ.

ಪ್ರಕರಣವೇನು?: ‘2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಅನಂತ ಕುಮಾರ್ ಅವರು ಶಿರಸಿಯ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ವೇಳೆ ಪ್ರಚೋದನಕಾರಿ ಅಂಶಗಳನ್ನು ಪ್ರಸ್ತಾಪಿಸಿದ್ದರು’ ಎಂದು ಆರೋಪಿಸಿದ ಪ್ರಕರಣ ಇದಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.