ADVERTISEMENT

ರಮೇಶ ಜಾರಕಿಹೊಳಿಗೆ ಅವಮಾನ ಮಾಡುವ ಪೋಸ್ಟರ್ ಅಂಟಿಸಿದವರ ಬಂಧನಕ್ಕೆ ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 16:49 IST
Last Updated 2 ನವೆಂಬರ್ 2023, 16:49 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಂಗಳೂರು: ಪಕ್ಷದ ನಾಯಕ ರಮೇಶ ಜಾರಕಿಹೊಳಿ ಅವರಿಗೆ ಅವಮಾನ ಮಾಡುವ ಮತ್ತು ಅಗೌರವ ತೋರುವ ಪೋಸ್ಟರ್‌ ಅಂಟಿಸಿ ತೇಜೋವಧೆ ಮಾಡಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಅವರಿಗೆ ಗುರುವಾರ ದೂರು ಸಲ್ಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ರಮೇಶ ಜಾರಕಿಹೊಳಿ ಅವರು ಗೌರವಸ್ಥ ಕುಟುಂಬದ ಹಿನ್ನೆಲೆಯವರು. ಈ ಹಿಂದೆ ಶಾಸಕರಾಗಿ ಮತ್ತು ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ ವಿರುದ್ಧ ಪೋಸ್ಟರ್‌ ಅಂಟಿಸಿರುವ ಕೃತ್ಯದ ಹಿಂದೆ ಯಾರೋ ದೊಡ್ಡ ನಾಯಕರಿದ್ದಾರೆ ಎಂದು ಹೇಳಿದರು.

ನಾಲ್ಕು ದಿನಗಳು ಕಳೆದರೂ ಪೋಸ್ಟರ್ ಅಂಟಿಸಿದವರನ್ನು ಬಂಧಿಸಿಲ್ಲ. ಸಿಸಿ ಕ್ಯಾಮೆರಾ ಬಳಸಿ ಪೋಸ್ಟರ್‌ ಅಂಟಿಸಿದವರನ್ನು ಬಂಧಿಸಬೇಕು. ಇದರ ಹಿಂದೆ ಇರುವವರನ್ನು ಪತ್ತೆ ಮಾಡಲು ಆಗ್ರಹಿಸಿ ದೂರು ನೀಡಿದ್ದೇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಕಮಿಷನರ್‌ ಹೇಳಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.