ADVERTISEMENT

ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್‌ ನಿಲುವೇನು?: ಬಿಜೆಪಿ

ಟ್ವಿಟರ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 2:23 IST
Last Updated 10 ಏಪ್ರಿಲ್ 2021, 2:23 IST
   

ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಶಿವಸೇನೆ ಹೇಳಿಕೆ ಕುರಿತು ತಮ್ಮ ನಿಲುವು ತಿಳಿಸಲಿ’ ಎಂದು ಆಗ್ರಹಿಸಿದೆ.

‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿ ಎಂದು ಕಾಂಗ್ರೆಸ್‌ನ ಮಿತ್ರಪಕ್ಷವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯೇ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಧ್ವನಿ ಎತ್ತದೆ ಅಲ್ಲಿನ ಸರ್ಕಾರದ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದೇಕೆ? ಬೆಳಗಾವಿ ನಮ್ಮದು ಎಂದು ಸಂಸತ್ತಿನಲ್ಲೇ ಹೇಳಿದ ಶಿವಸೇನೆ ಜತೆ ಕಾಂಗ್ರೆಸ್‌ ಮೈತ್ರಿಯಲ್ಲಿದೆ. ಶಿವಸೇನೆ ಸಂಸದನ ಮಾತನ್ನು ಕೆಪಿಸಿಸಿ ಅಧ್ಯಕ್ಷರು ವಿರೋಧಿಸುತ್ತಾರಾ? ಪುರಸ್ಕರಿಸುತ್ತಾರಾ?’ ಎಂದು ಬಿಜೆಪಿ ಕೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.