ADVERTISEMENT

ಪಾದಕ್ಕೆ ಎರಗುವ ಪರಿಯನ್ನು ಡಿಕೆಶಿ ನೋಡಿ ಕಲಿಯಿರಿ: ಖಂಡ್ರೆಗೆ ಬಿಜೆಪಿ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ನವೆಂಬರ್ 2021, 14:15 IST
Last Updated 30 ನವೆಂಬರ್ 2021, 14:15 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

ಖಂಡ್ರೆ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು! ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ಅವರನ್ನು ನೋಡಿ ಕಲಿಯಿರಿ’ ಎಂದು ಉಲ್ಲೇಖಿಸಿದೆ.

‘ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.