ADVERTISEMENT

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಪಿಟಿಐ
Published 20 ಫೆಬ್ರುವರಿ 2023, 13:23 IST
Last Updated 20 ಫೆಬ್ರುವರಿ 2023, 13:23 IST
ಅರುಣ್ ಸಿಂಗ್
ಅರುಣ್ ಸಿಂಗ್    

ಮಂಗಳೂರು (ಪಿಟಿಐ): ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ನಿಯಮಿತ ಆರೋಗ್ಯ ತಪಾಸಣೆ ಹಾಗೂ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರು ಆಸ್ಪತ್ರೆಗೆ ದಾಖಲಾದರು ಎಂದು ಪಕ್ಷದ ಮೂಲಗಳು ಹೇಳಿವೆ.

ರಾಜ್ಯ ಪ್ರವಾಸದಲ್ಲಿರುವ ಅರುಣ್‌ ಸಿಂಗ್‌ ಅವರು ರಾಜ್ಯ ವಿಧಾನಸಭೆ ಚುನಾವಣೆಯ ಈ ಸಂದರ್ಭದಲ್ಲಿ ಅವರು ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

ADVERTISEMENT

ಜೆ.ಪಿ.ನಡ್ಡಾ ಅವರು ಉಡುಪಿಯಲ್ಲಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಸೋಮವಾರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.