ADVERTISEMENT

ಜೂ.30 ರವರೆಗೆ ಬಿಜೆಪಿ ಮಹಾ ಸಂಪರ್ಕ ಅಭಿಯಾನ: ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 31 ಮೇ 2023, 20:57 IST
Last Updated 31 ಮೇ 2023, 20:57 IST
ಭಗವಂತ ಖೂಬಾ
ಭಗವಂತ ಖೂಬಾ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷಗಳ ಆಡಳಿತ ಮತ್ತು ಸಾಧನೆಗಳ ಕುರಿತು ಜನರಿಗೆ ವಿವರಿಸಲು ಜೂನ್‌ 30ರವರೆಗೆ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ಈ ಸಂಬಂಧ ಪಕ್ಷದ ಕಚೇರಿಯಲ್ಲಿ ಬುಧವಾರ ರಾಜ್ಯದ ಆಯ್ದ ಲೋಕಸಭಾ ಸದಸ್ಯರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ 9 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಮೂಲಭೂತ ಸೌಕರ್ಯ ಯೋಜನೆಗಳ ಜಾರಿ, ಸಾಮಾಜಿಕ ಸುರಕ್ಷತಾ ಯೋಜನೆಗಳ ಜಾರಿ ವಿಷಯವನ್ನು ಮನೆ ಮನೆಗೆ ತಲುಪಿಸಲು ಮಹಾ ಸಂಪರ್ಕ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ ಎಂದರು.

ADVERTISEMENT

ಅಭಿಯಾನದ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಲಾಗುವುದು. ಕೇಂದ್ರದ ಅನುದಾನದಿಂದ ಲೋಕಸಭಾ ಕ್ಷೇತ್ರಗಳಲ್ಲಿ ಕೈಗೊಂಡ ಮೂಲಸೌಕರ್ಯಗಳ ವಿವರ ಕೊಡಲಾಗುವುದು. ಪ್ರಬುದ್ಧರ ಸಭೆ, ವ್ಯಾಪಾರಸ್ಥರ ಸಭೆ, ಯೋಗ ದಿನಾಚರಣೆ ಸೇರಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುವುದು‌. 2024ರ ಲೋಕಸಭಾ ಚುನಾವಣಾ ತಯಾರಾಗುವುದು ಇದರ ಉದ್ದೇಶವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.