ADVERTISEMENT

ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್‌ಗೌಡ, ತನ್ನೀರಾ ಮೈನಾ ವಿರುದ್ಧ ದೂರು

ವಿನಯ್ ಸೋಮಯ್ಯ ಅವರ ಸಹೋದರ ಜೀವನ್ ಸೋಮಯ್ಯ ದೂರು ನೀಡಿದ್ದಾರೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2025, 9:37 IST
Last Updated 4 ಏಪ್ರಿಲ್ 2025, 9:37 IST
<div class="paragraphs"><p>ಪೊನ್ನಣ್ಣ,&nbsp;ಮಂಥರ್‌ಗೌಡ,&nbsp;ತನ್ನೀರಾ ಮೈನಾ ವಿನಯ್ ಸೋಮಯ್ಯ</p></div>

ಪೊನ್ನಣ್ಣ, ಮಂಥರ್‌ಗೌಡ, ತನ್ನೀರಾ ಮೈನಾ ವಿನಯ್ ಸೋಮಯ್ಯ

   

ಬೆಂಗಳೂರು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದ ನಿವಾಸಿ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥರ್‌ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮೂವರ ಕಿರುಕುಳದಿಂದ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿನಯ್ ಸೋಮಯ್ಯ ಅವರ ಸಹೋದರ ಜೀವನ್ ಸೋಮಯ್ಯ ದೂರು ನೀಡಿದ್ದಾರೆ.

ADVERTISEMENT

ಕೊಡಗು ಸಮಸ್ಯೆಗಳು ಎನ್ನುವ ವಾಟ್ಸ್‌ಆ್ಯಪ್ ಗ್ರೂಪ್ ಅಡ್ಮಿನ್ ಸಹ ಆಗಿದ್ದ ವಿನಯ್ ಅವರು ಮರಣ ಪತ್ರ ಬರೆದಿಟ್ಟು ನಾಗವಾರದ ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಶಾಸಕರೇ ಕಾರಣ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.