ನವದೆಹಲಿ: ಕಿರಿಯ ಪುತ್ರ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಒತ್ತಡ ಹೇರಿದ್ದಾರೆ.
ಉಪ ಮುಖ್ಯಮಂತ್ರಿ ಸ್ಥಾನ ಕೊಡದೇ ಇದ್ದರೆ, ಸಚಿವ ಸ್ಥಾನ ನೀಡಿ ಬೃಹತ್ ಕೈಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಖಾತೆಗಳನ್ನು ಕೊಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಗೊತ್ತಾಗಿದೆ.
ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಸೊರಬದ ಶಾಸಕ ಕುಮಾರ್ ಬಂಗಾರಪ್ಪಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದೂ ಯಡಿಯೂರಪ್ಪ ಒತ್ತಾಸೆ. ಈ ಬೇಡಿಕೆಗೆ ಸಮ್ಮತಿ ನೀಡುವುದು ಅಥವಾ ನೀಡದೇ ಇರುವುದು ವರಿಷ್ಠರಿಗೆ ಬಿಟ್ಟ ವಿಚಾರ. ನಾಯಕರ ಜತೆಗಿನ ಚರ್ಚೆಯ ವೇಳೆ ಬೊಮ್ಮಾಯಿ, ಈ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.