ADVERTISEMENT

ರಾಜ್ಯದಾದ್ಯಂತ ಇಂದು ಕಪ್ಪು ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 30 ಮೇ 2022, 19:31 IST
Last Updated 30 ಮೇ 2022, 19:31 IST

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿ, ಮಸಿ ಎರಚಿರುವ ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ಮೇ 31ರಂದು ಕಪ್ಪು ದಿನ ಆಚರಿಸಲು ರೈತ ಸಂಘಟನೆ ಮುಖಂಡರು ಕರೆ ನೀಡಿದ್ದಾರೆ.

‘ಟಿಕಾಯತ್ ಮೇಲಾದ ದಾಳಿ, ಇಡೀ ರೈತ ಸಮುದಾಯ ಮೇಲಾದ ದಾಳಿ ಆಗಿದೆ. ಇದನ್ನು ಖಂಡಿಸಿ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಪ್ಪು ಪಟ್ಟಿ ಧರಿಸಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡುತ್ತಿವೆ’ ಎಂದು ರೈತ ಮುಖಂಡರಾದ ಕೆ.ಟಿ. ಗಂಗಾಧರ, ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT