ಬೆಂಗಳೂರು: ಲೇಖಕಿ ಪ್ರೇಮಾಭಟ್ ಅವರು ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ2021ನೇ ಸಾಲಿನ ‘ಡಾ.ವಿಜಯಾ ಸುಬ್ಬರಾಜ್ ಗಣ್ಯಲೇಖಕಿ’ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಥಾ ಸಾಹಿತ್ಯ ಕ್ಷೇತ್ರದಲ್ಲಿನ ಕೊಡುಗೆಯನ್ನು ಆಧರಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಚಿದಾನಂದ ಸಾಲಿ ಅವರ‘ಸಕಾರಣ’ ಕೃತಿಗೆ ‘ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿ’ ಸಿಕ್ಕಿದೆ. ಈ ಕೃತಿ2020ರಲ್ಲಿ ಪ್ರಕಟವಾಗಿತ್ತು.ನಾ.ದಾಮೋದರ ಶೆಟ್ಟಿ ಮತ್ತು ಡಿ.ಮಂಗಳಾ ಪ್ರಿಯದರ್ಶಿನಿ ಅವರು ಆಯ್ಕೆ ಸಮಿತಿಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.