ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು.
ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ ಮುಖ್ಯಮಂತ್ರಿಯವರದು ಎಂದರು.
ಇದನ್ನೂ ಓದಿ: ಸದ್ಯವೇ ಬಿಎಂಟಿಸಿ ಬಸ್ ದರ ಏರಿಕೆ ಸಾಧ್ಯತೆ; ಸಿಎಂ ಒಪ್ಪಿದರಷ್ಟೇ ಹೆಚ್ಚಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.