ADVERTISEMENT

ಸಿಎಂ ಸಚಿವಾಲಯಕ್ಕೆ ಬಿಎಸ್‌ವೈ ಆಪ್ತ ಉಮೇಶ್ ನಿಯೋಜನೆ ಆದೇಶ ಹಿಂಪಡೆದ ಬಿಎಂಟಿಸಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 7:48 IST
Last Updated 8 ಅಕ್ಟೋಬರ್ 2021, 7:48 IST
   

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿಗೊಳಗಾಗಿರುವ ಎಂ.ಆರ್. ಉಮೇಶ್ ಅವರನ್ನು ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ನಿಯೋಜನೆ ಮಾಡಿದ್ದ ಆದೇಶವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಿಂಪಡೆದಿದೆ.

ಬಿಎಂಟಿಸಿಯ ಪುಟ್ಟೇನಹಳ್ಳಿಯ ಡಿಪೊ ಚಾಲಕ ಕಂ. ನಿರ್ವಾಹಕ ಹುದ್ದೆಯಲ್ಲಿದ್ದ ಉಮೇಶ್ 2007ರಿಂದಲೂ ನಿಯೋಜನೆ ಮೇಲೆ ರಾಜಕಾರಣಿಗಳ ಆಪ್ತ ಸಹಾಯಕರಾಗಿದ್ದರು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಚಿವಾಲಯದಲ್ಲಿ ಸಿಬ್ಬಂದಿಯಾಗಿದ್ದರು.

ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದ ಉಮೇಶ್ ಮತ್ತು ಅವರ ಜತೆ ನಿಕಟ ನಂಟು ಹೊಂದಿರುವ ಗುತ್ತಿಗೆದಾರರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಉಮೇಶ್ ನಿಯೋಜನೆಯನ್ನು ಹಿಂಪಡೆದು ಗುರುವಾರ ಸಂಜೆಯೇ ಬಿಎಂಟಿಸಿಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.