ADVERTISEMENT

ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: CM, DCMಗೆ ಇ–ಮೇಲ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 10:45 IST
Last Updated 5 ಮಾರ್ಚ್ 2024, 10:45 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ </p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

   

ಬೆಂಗಳೂರು: ‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿಯಲ್ಲಿ ಮತ್ತಷ್ಟು ಕಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರ ಇ–ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘2.5 ಮಿಲಿಯನ್ ಡಾಲರ್ (₹ 20.27 ಕೋಟಿ) ಹಣ ನೀಡಬೇಕು. ಇಲ್ಲದಿದ್ದರೆ, ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇತರೆಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಸಂದೇಶದಲ್ಲಿ ಬೆದರಿಸಲಾಗಿದೆ.

ADVERTISEMENT

ಬೆದರಿಕೆ ಸಂದೇಶ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ಇ–ಮೇಲ್ ಐಡಿ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.