ADVERTISEMENT

ಬೆಳಗಾವಿ: ಬಯಲು ಬಹಿರ್ದೆಸೆಗೆ ತೆರಳಿದ್ದಾಗ ನಾಯಿಗಳ ದಾಳಿ– ಮಗು ಸಾವು

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2018, 13:00 IST
Last Updated 29 ನವೆಂಬರ್ 2018, 13:00 IST
ಅಬ್ಬಾಸ್ ಅಲಿ
ಅಬ್ಬಾಸ್ ಅಲಿ   

ಬೆಳಗಾವಿ: ತಾಲ್ಲೂಕಿನ ಪಂಥಬಾಳೇಕುಂದ್ರಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ಎರಡೂವರೆ ವರ್ಷದ ಬಾಲಕ ಅಬ್ಬಾಸ್ ಅಲಿ ಯೂಸುಫ್‌ ಸನದಿ (2) ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾನೆ.

‘ಬುಧವಾರ ಸಂಜೆ ಗಾಯಗೊಂಡಿದ್ದ ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕೆಎಲ್‌ಇ ಅಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಮಾರಿಹಾಳ ಠಾಣೆ ಇನ್‌ಸ್ಪೆಕ್ಟರ್‌ ವಿಜಯಕುಮಾರ್‌ ಶಿನ್ನೂರ್‌ ತಿಳಿಸಿದರು.

‘ಮನೆಯ ಬಳಿಯ ರಸ್ತೆಬದಿಯಲ್ಲಿ ಆತನನ್ನು ಬಹಿರ್ದೆಸೆಗೆ ಕೂರಿಸಿದ್ದ ತಾಯಿ ಸಮೀನಾ, ಮುಗಿದ ನಂತರ ಬಾ ಎಂದು ಹೇಳಿ ಮನೆಯಲ್ಲಿ ಪಾತ್ರೆ ತೊಳೆಯಲು ಹೋಗಿದ್ದಾರೆ. ಈ ವೇಳೆ, 2–3 ಬೀದಿನಾಯಿಗಳು ದಾಳಿ ಮಾಡಿವೆ. ಮಗುವಿನ ತಲೆ, ಕತ್ತು, ಕಾಲನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಮಗುವಿನ ಚೀರಾಟ, ನಾಯಿಗಳು ಬೊಗಳುತ್ತಿದ್ದುದ್ದನ್ನು ಕೇಳಿಸಿಕೊಂಡ ಸಮೀನಾ ಓಡಿ ಬಂದಿದ್ದಾರೆ. ಆ ವೇಳೆಗೆ ಸ್ಥಳೀಯರೂ ಬಂದು ನಾಯಿಗಳನ್ನು ಓಡಿಸಿ, ಮಗುವನ್ನು ರಕ್ಷಿಸಿದ್ದರು ಎಂದು ಮಾಹಿತಿ ಬಂದಿದೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.