ADVERTISEMENT

ಬಾಲಕನ ಅಪಹರಣ: ₹ 10 ಕೋಟಿ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 19:51 IST
Last Updated 18 ಡಿಸೆಂಬರ್ 2020, 19:51 IST
ಬಾಲಕ ಅನುಭವ್
ಬಾಲಕ ಅನುಭವ್   

ಉಜಿರೆ: ಉಜಿರೆಯಲ್ಲಿ ನಡೆದ ಎಂಟು ವರ್ಷ ಪ್ರಾಯದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಶುಕ್ರವಾರ ಬಾಲಕನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.

ಪ್ರಕರಣ ಭೇದಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಪಹರಣಕಾರರು ಗುರುವಾರ ₹ 17 ಕೋಟಿ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಇದನ್ನು ₹ 10 ಕೋಟಿಗೆ ಇಳಿಕೆ ಮಾಡಿದ್ದು, ಬಿಟ್ ಕಾಯಿನ್ ಮೂಲಕ ಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಕೂಲಂಕಷ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಬಾಲಕನ ಮನೆಯವರ ಪರಿಚಯದವರಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದರು.

ಉಜಿರೆ ರಥಬೀದಿಯ ನಿವಾಸಿ ಎ.ಕೆ.ಶಿವನ್ ಅವರ ಮೊಮ್ಮಗ 8 ವರ್ಷದ ಅನುಭವ್‌ನನ್ನು ಗುರುವಾರ ಸಂಜೆ ಕಾರಿನಲ್ಲಿ ಬಂದವರು ಅಪಹರಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.