ADVERTISEMENT

ನೆರೆ ಪರಿಹಾರ: ಪ್ರಧಾನಿ ಮೋದಿಯೊಂದಿಗೆ ಬಿಎಸ್‌ವೈ ಚರ್ಚೆ, ಅನುದಾನ ಬಿಡುಗಡೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 6:33 IST
Last Updated 16 ಆಗಸ್ಟ್ 2019, 6:33 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ನವದೆಹಲಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಅಧ್ಯಯನ ತಂಡ ಕಳುಹಿಸುವಂತೆ ಹಾಗೂ ತುರ್ತುಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರುಪ್ರಧಾನಿ ನರೇಂದ್ರ ಮೋದಿ ಅವರಿಗೆಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ‘ಪ್ರಧಾನಿ ಅವರೊಂದಿಗೆ ನೆರೆ ಹಾವಳಿ, ಸಂತ್ರಸ್ತರ ಬಗ್ಗೆ 40 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇವೆ. ಜತೆಗೆ, ತುರ್ತು ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದೇವೆ.ತಕ್ಷಣವೇ ಅಧ್ಯಯನ ತಂಡ ಕಳುಹಿಸುವುದಾಗಿಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

ಇದೇ ವೇಳೆ ಶಾಸಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್, ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.