ADVERTISEMENT

‘ಭಕ್ತರು ಆತಂಕಗೊಳ್ಳಬಾರದು’: ಸ್ವಾಮೀಜಿ ಆರೋಗ್ಯ ವಿಚಾರಿಸಿದ ಬಳಿಕ ಯಡಿಯೂರಪ್ಪ ಮನವಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 12:12 IST
Last Updated 20 ಜನವರಿ 2019, 12:12 IST
   

ತುಮಕೂರು:‘ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಆಯುರ್ವೇದ ವಿಶೇಷ ಔಷಧಿ ಕೊಡುತ್ತಿದ್ದೇವೆ. ಆರೋಗ್ಯಸುಧಾರಣೆ ಆಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಭಕ್ತರು ಆತಂಕಕ್ಕೊಳಗಾಗಬಾರದು’ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೋ ದೈವ ಶಕ್ತಿ ಸ್ವಾಮೀಜಿ ಅವರ ಆರೋಗ್ಯ ಸುಧಾರಣೆ ಮಾಡುತ್ತಿದೆ. ಇದು ನಮ್ಮೆಲ್ಲರಿಗೂ ಸಮಾಧಾನ ತಂದಿದೆ. ಕಳೆದ ಹನ್ನೆರಡು ದಿನಗಳಿಂದ ಸ್ವಾಮೀಜಿ ಆರೋಗ್ಯ ಸ್ಥಿತಿ ಒಂದೇ ರೀತಿಯಲ್ಲಿದೆ’ಎಂದುಹೇಳಿದರು.

‘ಕಿರಿಯ ಶ್ರೀಗಳು ಮತ್ತು ಸ್ವಾಮೀಜಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ಚಿಕಿತ್ಸೆ ಬಗ್ಗೆ ಸುಮಾರು ಅರ್ಧ ತಾಸು ವಿವರಿಸಿದರು’ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.