ADVERTISEMENT

ಚಿಂಚೋಳಿ: ಬಾವಗಿ ಭದ್ರೇಶ್ವರ ದರ್ಶನ ಪಡೆದ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 15 ಮೇ 2019, 6:36 IST
Last Updated 15 ಮೇ 2019, 6:36 IST
ತಾಂಡೂರಿನಲ್ಲಿರುವ ಬಾವಗಿ ಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪ ದೇವರ ದರ್ಶನ ಪಡೆದರು
ತಾಂಡೂರಿನಲ್ಲಿರುವ ಬಾವಗಿ ಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪ ದೇವರ ದರ್ಶನ ಪಡೆದರು   

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಇಲ್ಲಿಗೆ ಸಮೀಪದ ತೆಲಂಗಾಣದ ತಾಂಡೂರಿನಲ್ಲಿರುವ ಪ್ರಸಿದ್ಧ ಬಾವಗಿ ಭದ್ರೇಶ್ವರ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೇವರ ದರ್ಶನ ಪಡೆದರು.

ದರ್ಶನ ಬಳಿಕ ಅರ್ಚಕರು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿದ್ದರು. 15 ಸಾವಿರಕ್ಕೂ ಅಧಿಕ ವೀರಶೈವ ಲಿಂಗಾಯತ ಸಮಾಜದ ಜನರು ತಾಂಡೂರಿನಲ್ಲಿದ್ದಾರೆ.

ವೀರಶೈವ ಲಿಂಗಾಯತರನ್ನು ಹಿಂದುಳಿದ ವರ್ಗ ‘ಎ’ಗೆ ಸೇರಿಸಬೇಕು. ಕಲ್ಯಾಣ ಮಂಟಪದ ಅಗತ್ಯವಿದೆ ಎಂದು ಸಮಾಜದ ಕಾರ್ಯದರ್ಶಿ ಶೇಖರ್ ಮನವಿ ಮಾಡಿದರು

ADVERTISEMENT

ಶಾಸಕರಾದ ಬಿ.ಜಿ.ಪಾಟೀಲ, ಬಸವರಾಜ ಮತ್ತಿಮೂಡ, ಶಶೀಲ್ ಜಿ.ನಮೋಶಿ, ಸಮಾಜದ ಅಧ್ಯಕ್ಷ ವಾಲಿ ಶಾಂತಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.