ADVERTISEMENT

ಮಹಾಗಣಪತಿ ಅಥರ್ವ ಶೀರ್ಷ ಯಾಗದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 20:30 IST
Last Updated 25 ಡಿಸೆಂಬರ್ 2019, 20:30 IST
   

ಶಿರ್ವ: ಕುತ್ಯಾರು ಯಾಗ ಸಂಘಟನಾ ಸಮಿತಿಯ ಆಶ್ರಯದಲ್ಲಿ ಐದು ದಿನಗಳ ಪರ್ಯಂತ ನಡೆಯುವ ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವ ಶೀರ್ಷ ಯಾಗಕ್ಕೆ ಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುವ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಮಾರು 15 ನಿಮಿಷಗಳ ಕಾಲ ಸಂಕಲ್ಪದಲ್ಲಿ ಪಾಲ್ಗೊಂಡರು. ಯಾಗಮಂಟಪದಲ್ಲಿ ಭಕ್ತಿ ಶ್ರದ್ಧೆಯಿಂದ ವಿರಾಜಮಾನರಾಗಿ ವೈದಿಕರ ಅನತಿಯಂತೆ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ಈ ಸಮಯದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಯಡಿಯೂರಪ್ಪ ಅವರ ಜೊತೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT