ADVERTISEMENT

ಸ್ನೇಹಕ್ಕೆ ಸಾಕ್ಷಿಯಾದ ಜನ್ಮದಿನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 19:26 IST
Last Updated 27 ಫೆಬ್ರುವರಿ 2020, 19:26 IST
ಯಡಿಯೂರಪ್ಪ ಅವರನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸನ್ಮಾನಿಸಿದರು. ಬಿಜೆಪಿ ಮುಖಂಡ ಮುರಳೀಧರ ರಾವ್‌ , ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ , ಬಿ.ಎಲ್‌ ಸಂತೋಷ್‌, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಲ್ಹಾದ ಜೋಶಿ ಇದ್ದರು –ಪ್ರಜಾವಾಣಿ ಚಿತ್ರ
ಯಡಿಯೂರಪ್ಪ ಅವರನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸನ್ಮಾನಿಸಿದರು. ಬಿಜೆಪಿ ಮುಖಂಡ ಮುರಳೀಧರ ರಾವ್‌ , ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ , ಬಿ.ಎಲ್‌ ಸಂತೋಷ್‌, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಲ್ಹಾದ ಜೋಶಿ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜಕಾರಣಿಗಳು ಎಂದರೆ ಪರಸ್ಪರ ಬೈದಾಡಿಕೊಳ್ಳುತ್ತಲೇ, ಗುದ್ದಾಡುತ್ತಲೇ ಇರುವವರು ಎಂಬ ಭಾವನೆ ಕರಗಿ ಅವರಲ್ಲೂ ಪ್ರೀತಿ, ಸ್ನೇಹ ಮತ್ತು ಆರ್ದ‍್ರತೆ ಇದೆ ಎಂಬುದಕ್ಕೆಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿನಂದನಾ ಸಮಾರಂಭ ಸಾಕ್ಷಿಯಾಯಿತು.

ಅರಮನೆ ಆವರಣದ ವೈಟ್‌ ಪೆಟಲ್ಸ್‌ನಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಬಿಜೆಪಿ ಸಿದ್ಧಾಂತದ ಕಡು ಟೀಕಾಕಾರ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹಾಜರಿ ಕಾರ್ಯಕ್ರಮಕ್ಕೆ ವಿಶಿಷ್ಟ ಆಯಾಮವನ್ನೇ ನೀಡಿತು.

ಸಿದ್ದರಾಮಯ್ಯ ತಮ್ಮ ಎಂದಿನ ಮಾತು,ನಗು, ನಡಿಗೆಯ ಶೈಲಿಯಿಂದ ಬಿಜೆಪಿ ಮತ್ತು ಯಡಿಯೂರಪ್ಪ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡಿದ್ದೂ ಅಲ್ಲದೇ, ‘ಹೌದಾ ಹುಲಿಯಾ’ ಎಂದೂ ಅಭಿಮಾನದ ಕೂಗನ್ನೂ ಹಾಕಿಸಿಕೊಂಡರು.

ADVERTISEMENT

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಭಾವನೆಯೂ ಇದೇ ಆಗಿತ್ತು. ‘ಕೆಲವು ಸಂದರ್ಭಗಳಲ್ಲಿ ರಾಜಕೀಯವನ್ನು ಬದಿಗಿಟ್ಟು ವಿಭಿನ್ನ ವಿಚಾರಧಾರೆಯ ರಾಜಕಾರಣಿಗಳು ಪರಸ್ಪರ ಸೇರಬೇಕು.
ಸ್ನೇಹ ಮತ್ತು ಮನುಷ್ಯತ್ವಕ್ಕೆ ಬೆಲೆ ನೀಡಬೇಕು. ಈ ಕಾರ್ಯಕ್ರಮ ಅದಕ್ಕೊಂದು ಮೇಲ್ಪಂಕ್ತಿಯಾಗಿದೆ’ ಎಂದರು.

ನಿರಂತರ ಹೋರಾಟಗಳ ಮೂಲಕ ಯಡಿಯೂರಪ್ಪ ಕರ್ನಾಟಕ ಮಾತ್ರವಲ್ಲ, ರಾಷ್ಟ್ರ ಮಟ್ಟದ ವರ್ಚಸ್ವಿ ನಾಯಕರೂ ಹೌದು
-ರಾಜನಾಥ್‌ ಸಿಂಗ್‌ ರಕ್ಷಣಾ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.