ADVERTISEMENT

ರಾಜಕೀಯ ಉಳಿವಿಗಾಗಿ ಕಾಂಗ್ರೆಸ್‌ನಿಂದ ಹೊಲಸು ರಾಜಕಾರಣ: ಬಿಜೆಪಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 15:35 IST
Last Updated 31 ಮಾರ್ಚ್ 2021, 15:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಾಂಗ್ರೆಸ್ ತನ್ನ ರಾಜಕೀಯ ಉಳಿವಿಗಾಗಿ ಹೊಲಸು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ವಿರುದ್ಧ ಬಿಜೆಪಿ ಈ ಟೀಕೆ ಮಾಡಿದೆ.

‘ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಇಲಾಖೆಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ಆಕ್ಷೇಪಿಸಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್‌ ಮಾಡಿದ್ದರು.

ಇದೀಗ ತಿರುಗೇಟು ಕೊಟ್ಟಿರುವ ಬಿಜೆಪಿ, ‘ಕಾಂಗ್ರೆಸ್ ಬಗ್ಗೆ ನಾವು ಯಾವಾಗಲೂ ಹೇಳುತ್ತಿರುವುದು ಈಗ ವಾಸ್ತವವಾಗಿದೆ. ಕಾಂಗ್ರೆಸ್ ಒಂದು ವಿಭಜಿತ ಮನೆಯಾಗಿದ್ದು, ಅದರ ನಾಯಕರು ಅಧಿಕಾರಕ್ಕಾಗಿ ಹೋರಾಡುತ್ತಿದ್ದಾರೆ. ಇತ್ತ ಅಕ್ರಮ ಸಿಡಿ ಉತ್ಪಾದನಾ ದಂಧೆಯಲ್ಲಿ ಕಾಂಗ್ರೆಸ್ ನೇರವಾಗಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ತನ್ನ ರಾಜಕೀಯ ಉಳಿವಿಗಾಗಿ ಹೊಲಸು ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.